Saturday, November 24, 2018

ನಮ್ಮಲ್ಲಿನ ಸ್ಥಳ ಪುರಾಣಗಳು (Mythes) -97

ಶ್ರೀಕ್ಷೇತ್ರ ಧರ್ಮಸ್ಥಳ (Dharmasthala)

ಕರ್ನಾಅಕದಲ್ಲಷ್ಟೇ ಅಲ್ಲದೆ ನೆರೆ ರಾಜ್ಯ ಕೇರಳದಲ್ಲಿ ಸಹ ಮನೆಮಾತಾಗಿರುವ ಸತ್ಯ, ಧರ್ಮನ್ಯಾಯಕ್ಕೆ ಹೆಸರಾದ ಕ್ಷೇತ್ರ ಧರ್ಮಸ್ಥಳಕ್ಕೆ ನೂರಾರು ವರ್ಷದ ಇತಿಹಾಸವಿದೆ. ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಎಲ್ಲಾ ದೈವಗಳ ಅಧಿಪತಿಯಾಗಿದ್ದು ಇವನೊಂದಿಗಿನ ಧರ್ಮದೇವತೆಗಳು ಇಲ್ಲಿನ ಹೆಗ್ಗಡೆಗಳ ಆದೇಶವನ್ನು ಪಾಲಿಸುತ್ತಾರೆ  ಇಂತಹಾ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ ದಕ್ಷಿಣ ಭಾರತೀಯರ ಆರಾಧ್ಯ ಕ್ಷೇತ್ರವಾಗಿದೆರ್ಮಸ್ಥಳವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಂದು ಪ್ರಸಿದ್ಧ ಧಾರ್ಮಿಕ ತಾಣ.

ಶ್ರೀ ಮಂಜುನಾಥ ಸ್ವಾಮಿ


ನೇತ್ರಾವತಿ ನದಿಯ ದಡದಲ್ಲಿ  ನೆಲೆಯಾಫ಼್ದ ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿ ವಿಗ್ರಹವನ್ನು  ಮಂಗಳೂರಿನ ಕದ್ರಿ ಎಂಬ ಸ್ಥಳದಿಂದ ಉಡುಪಿಯ ಯತಿಗಳಾಗಿದ್ದ ಶ್ರೀ ವಾದಿರಾಜರು ಸ್ವತಃ ತಂದು ಪ್ರತಿಷ್ಠಾಪಿಸಿದರು ಎಂದು ಪುರಾಣಗಳು ಹೇಳುತ್ತವೆ. ಧರ್ಮಸ್ಥಳ ದಾನ ಧರ್ಮಕ್ಕೆ ಪ್ರಸಿದ್ಧವಾಗಿರುವುದಲ್ಲದೆ, ಭಕ್ತರಿಗೆ ನೈತಿಕ - ಸಾಂಸ್ಕೃತಿಕ ಕೇಂದ್ರವಾಗಿಯೂ ಆಕರ್ಷಿಸುತ್ತದೆ.

ಧರ್ಮಸ್ಥಳವು ದಕ್ಷಿಣ ಕನ್ನಡದ ಮಲೆನಾಡು ಪ್ರದೇಶದಲ್ಲಿದೆ.ಜಿಲ್ಲಾ ಕೇಂದ್ರವಾದ ಮಂಗಳೂರಿನಿಂದ 75 ಕಿ.ಮೀ.ದೂರದಲ್ಲಿದೆ.ಮಂಗಳೂರಿಗೆ ದೇಶದ ಎಲ್ಲಾ ಭಾಗಗಳಿಂದ ರಸ್ತೆ,ರೈಲು ಮತ್ತು ವಿಮಾನ ಯಾನ ಸೌಕರ್ಯಗಳಿದ್ದು ಧರ್ಮಸ್ಥಳಕ್ಕೆ ಕೂಡಾ ಉತ್ತಮ ಸಾರಿಗೆ ಸೌಕರ್ಯಗಳಿವೆ. ಧರ್ಮಸ್ಥಳವು ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಉಜಿರೆಯಿಂದ ಕೇವಲ 9 ಕಿ.ಮೀ ದೂರದಲ್ಲಿದೆ.ಬೆಂಗಳೂರಿನಿಂದ ಶಿರಾಡಿ ಘಾಟಿಯಾಗಿ ರಸ್ತೆಯಲ್ಲಿ ಹಾಗೂ ರೈಲಿನಲ್ಲಿ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಇಲ್ಲಿಗೆ ಆಗಮಿಸಬಹುದಾಗಿದೆ. ಇಲ್ಲಿಂದ ಸಮೀಪದ ಇತರ ಯಾತ್ರಾಕ್ಷೇತ್ರಗಳಾದ ಸುಬ್ರಹ್ಮಣ್ಯ,ಉಡುಪಿ,ಕೊಲ್ಲೂರು,ಕಟೀಲು ಮುಂತಾದೆಡೆಗೆ ಹೇರಳ ಸಾರಿಗೆ ಸೌಕರ್ಯವಿದೆ.

***

ಧರ್ಮಸ್ಥಳವು ರೋಚಕವಾದ ಹಿನ್ನೆಲೆಯನ್ನು ಹೊಂದಿದೆ. ಹಿಂದೆ ಧರ್ಮಸ್ಥಳವನ್ನು "ಕುಡುಮ" ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಈ ಪ್ರಾಂತ್ಯದಲ್ಲಿರುವ ನೆಲ್ಯಾಡಿ ಬೀಡು ಎಂಬ ಗೃಹದಲ್ಲಿ ಭೀಮಣ್ಣ ಪರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ದಂಪತಿಗಳು ವಾಸಿಸುತ್ತಿದ್ದರು. ಇವರ ಮನೆಗೆ ಬಂದ ನಾಲ್ವರು ಅತಿಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ದಂಪತಿಗಳು ನೋಡಿಕೊಂಡಿದ್ದರು. ಅದೇ ದಿನ ರಾತ್ರಿಯಲ್ಲಿ ಆ ನಾಲ್ವರು ಅತಿಥಿಗಳು ದೈವದ ರೂಪದ ಮೂಲಕ ಭೀಮಣ್ಣನವರ ಕನಸಿನಲ್ಲಿ ಬಂದು ತಾವು ಇಲ್ಲಿ ನೆಲೆಸಲು ಇಚ್ಛಿಸಿರುವುದಾಗಿ ತಿಳಿಸಿದರು. ಆ ನಾಲ್ವರು ದೇವತೆಗಳಿಗೆ ಅಣತಿಯಂತೆ ಮನೆಯನ್ನು ಬಿಟ್ಟುಕೊಟ್ಟ ಭೀಮಣ್ಣ ಎಂಬುವರು ದೇವಾಲಯ ನಿರ್ಮಿಸಿ ಬ್ರಾಹ್ಮಣ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಿದಂತೆ. ಆ ನಾಲ್ಕು ದೈವವೆಂದರೆ ಕಾಳರಾಹು - ಪುರುಷ ದೈವ, ಕಳರ್ಕಾಯಿ - ಸ್ತ್ರೀ ದೈವ, ಕುಮಾರಸ್ವಾಮಿ - ಪುರುಷ ದೈವ, ಹಾಗೂ ಕನ್ಯಾಕುಮಾರಿ - ಸ್ತ್ರೀ ದೈವ. ದಿನ ಕಳೆದಂತೆ ಅರ್ಚಕರು ಗುಡಿಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸುವಂತೆ ಭೀಮಣ್ಣನವರಿಗೆ ಸಲಹೆಯಿತ್ತರು. ಇದರಂತೆ ಧರ್ಮದೇವತೆಗಳೂ ಕೂಡ ಕದ್ರಿಯಲ್ಲಿರುವ ಶ್ರೀಮಂಜುನಾಥನ ಲಿಂಗವನ್ನು ತಂದು ಪ್ರತಿಷ್ಠಾಪಿಸುವಂತೆ ತಿಳಿಸಿದರು ಹಾಗೂ ಈ ಕಾರ್ಯ ಸಂಪನ್ನಗೊಳಿಸಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು. ಅಣ್ಣಪ್ಪಸ್ವಾಮಿಯವರು ಕದ್ರಿಗೆ ತೆರಳಿ ಅಲ್ಲಿಂದ ಶಿವಲಿಂಗವನ್ನು ಇಲ್ಲಿಗೆ ತರುವುದರೊಳಗೆ ಧರ್ಮಸ್ಥಳದ ಶ್ರೀಮಂಜುನಾಥನ ದೇವಾಲಯ ನಿರ್ಮಾಣವಾಗಿತ್ತೆಂದು ಹೇಳುತ್ತದೆ ಇಲ್ಲಿನ ಪ್ರತೀತಿ.

ಮತ್ತೊಂದು ದಂತಕಥೆಯ ಪ್ರಕಾರ, 16 ನೇಯ ಶತಮಾನದಲ್ಲಿ ದೇವಾರಜ ಹೆಗ್ಗಡೆಯವರು ಉಡುಪಿಯ ವಾದಿರಾಜರಿಗೆ ಇಲ್ಲಿಗೆ ಭೇಟಿ ನೀಡಲು ಅಹ್ವಾನಿಸಿದ್ದರು. ಮೊದಲೆ ದಾನ ಧರ್ಮಗಳಿಗೆ ಹೆಸರಾಗಿದ್ದ ಕುಡುಮ ಕ್ಷೇತ್ರಕ್ಕೆ ವಾದಿರಾಜರು ಭೇಟಿ ನೀಡಲು ಸಂತೋಷದಿಂದ ಒಪ್ಪಿದರು ಹಾಗೂ ಭೇಟಿಯೂ ನೀಡಿದರು. ನಂತರ ಧರ್ಮದೂಟ ಸ್ವೀಕರಿಸಲು ಒಪ್ಪಲಿಲ್ಲ. ಕಾರಣವೆಂದರೆ ಅಲ್ಲಿರುವ ಶಿವಲಿಂಗವು ವೈದಿಕ ಸಂಪ್ರದಾಯದಂತೆ ಪ್ರತಿಷ್ಠಾಪಿಸಲಾಗಿರಲಿಲ್ಲ ಎನ್ನುವುದು ಅವರ ಅಭಿಪ್ರಾಯವಾಗಿತ್ತು. ಈ ಸಂದರ್ಭದಲ್ಲಿ ಸ್ವತಃ ದೇವರಾಜ ಹೆಗ್ಗಡೆಯವರೆ ವಾದಿರಾಜರನ್ನು ಕುರಿತು ನಿಯಮಗಳಿಗನುಸಾರವಾಗಿ ಲಿಂಗವನ್ನು ತಾವೆ ಮರುಪ್ರತಿಷ್ಠಾಪಿಸಬೇಕೆಂದು ವಿನಂತಿಸಿಕೊಂಡರು. ಅವರ ವಿನಯತೆ, ದಾನ ಧಾರ್ಮಗಳ ಮನೋಭಾವದಿಂದ ಪ್ರಸನ್ನರಾದ ಯತಿಗಳು ಸ್ವತಃ ತಾವೆ ದೈವಿಕ ವಿಧಿ ವಿಧಾನಗಳ ಮೂಲಕ ಶಿವಲಿಂಗವನ್ನು ಪ್ರತಿಷ್ಠಾಪಿಸಿದರು ಹಾಗೂ ನೈತಿಕತೆ, ಸರಳತೆ, ಧರ್ಮ ನೆಲೆಯೂರಿರುವ ಈ ಕ್ಷೇತ್ರಕ್ಕೆ ಧರ್ಮಸ್ಥಳ ಎಂಬ ನಾಮಕರಣ ಮಾಡಿದರು. ಅಂದಿನಿಂದ ಈ ಕ್ಷೇತ್ರವು ಶ್ರೀಕ್ಷೇತ್ರ ಧರ್ಮಸ್ಥಳವಾಗಿ ಜನಪ್ರಿಯವಾಗಿದೆ.

Tuesday, November 13, 2018

ನಮ್ಮಲ್ಲಿನ ಸ್ಥಳ ಪುರಾಣಗಳು (Mythes) -96

ಹಾಸನ (Hassan)

ಹಾಸನ ಕರ್ನಾಟಕದ ಒಂದು ಜಿಲ್ಲಾಕೇಂದ್ರ. ಹಾಸನ ನಗರವು ಊರ ದೇವತೆಯಾದ ಹಾಸನಾಂಬ ದೇವತೆಯಿಂದ ತನ್ನ  ಹೆಸರನ್ನು ಪಡೆದುಕೊಂಡಿದೆ. ಮಲೆನಾಡು ಮತ್ತು ಬಯಲು ಸೀಮೆಯ ನಡುವೆ ನೆಲೆಸಿರುವುದರಿಂದ ಇಡೀ ಜಿಲ್ಲೆಯ ವಾಯುಗುಣ  ಅತ್ಯಂತ ಆಹ್ಲಾದಕರತೆಯಿಂದ ಕೂಡಿರುತ್ತದೆ. ನಗರವು ರಾಜಧಾನಿ ಬೆಂಗಳೂರಿನಿಂದ 187 ಕಿ.ಮೀ ದೂರದಲ್ಲಿದೆ. ಹಾಸನಕ್ಕೆರಸ್ತೆಯ ಮೂಲಕ ಮತ್ತು ರೈಲಿನ ಮೂಲಕ ಸುಲಭವಾಗಿ ತಲುಪಬಹುದು. ಮಂಗಳೂರು ವಿಮಾನ ನಿಲ್ದಾಣ (115) ಇಲ್ಲಿಗೆ ಸಮೀಪದ ವಿಮಾನ ನಿಲ್ದಾಣವಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಇಲ್ಲಿಂದ 187 ಕಿ.ಮೀ ದೂರದಲ್ಲಿದೆ.

ಹಾಸನ ಜಿಲ್ಲೆಯ ಬೇಲೂರು ಸಮೀಪದ ಹಳೆಬೀಡು ಪ್ರಸಿದ್ದ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಬೇಲೂರು ಚೆನ್ನಕೇಶವ ದೇವಾಲಯ ಶಿಲ್ಪಕಲೆಗಳಿಂದ ವಿಶ್ವ ಪ್ರಸಿದ್ದಿಯನ್ನು ಪಡೆದಿದೆ.  ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಹ ಬಾಹುಬಲಿ ಮೂರ್ತಿಯ ಕಾರಣ ಜೈನರ ಪುಣ್ಯಸ್ಥಳವಾಗಿದ್ದು ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿದೆ.

ಹಾಸನಂಬಾ ಸನ್ನಿಧಿ

ಹಾಸನಂಬಾ  ದೇವಿ


ಹಾಸನಕ್ಕೆ ಹಿಂದೆ ಸಿಂಹಾಸನಪುರಿ ಎಂದು ಹೆಸರಿತ್ತು. ದೇವಿಯರು ನೆಲೆಸಿದ ನಂತರ ಹಾಸನ ಎಂಬ ಹೆಸರು ಬಂದಿತು.

ಸುಮಾರು 12ನೇ ಶತಮಾನದಲ್ಲಿ ಹಾಸನದ ಚನ್ನಪಟ್ಟಣ ಪಾಳೆಗಾರನಾದ ಶ್ರೀ.ಕೃಷ್ಣಪ್ಪ ನಾಯ್ಕರಿಗೆ ಕನಸಿನಲ್ಲಿ ದೇವಿಯು ನಾನು ಇಂತಹ ಜಾಗದಲ್ಲಿ ಹುತ್ತದ ರೂಪದಲ್ಲಿ ನೆಲೆಸಿದ್ದೇನೆ, ನನಗೊಂದು ಗುಡಿಯನ್ನು ಕಟ್ಟಿಸು ಎಂದು ಹೇಳಿ ಮಾಯವಾದಳು. ನಂತರ ಪಾಳೆಗಾರನಾದ ಶ್ರೀ.ಕೃಷ್ಣಪ್ಪ ನಾಯ್ಕರು ಹುತ್ತದರೂಪದಲ್ಲಿದ್ದ ದೇವಿಯ ಗುಡಿಯನ್ನು ಕಟ್ಟಿಸಿದರು.

ವಿಶೇಷವೆಂದರೆ ಇಲ್ಲಿ ಎಲ್ಲಾ ದೇವಸ್ಥಾನಗಳಂತೆ ವರ್ಷ ಪೂರ್ತಿ ಪೂಜೆ ನಡೆಯುವುದಿಲ್ಲ.ರ್ಷಕ್ಕೆ ಕೇವಲ ಹತ್ತರಿಂದ ಹನ್ನೆರಡು ದಿನ ಮಾತ್ರ ಬಾಗಿಲು ತೆಗೆದಾಗ ದೇವಿಯರ ದರ್ಶನದ ಲಾಭವಾಗುತ್ತದೆ. ಆಶ್ವಯುಜ ಮಾಸದ ಹುಣ್ಣಿಮೆ ಕಳೆದ ನಂತರ ಬರುವಂತಹ ಗುರುವಾರದಂದು ಬಾಗಿಲನ್ನು (ವರ್ಷಕೊಮ್ಮೆ) ತೆರೆಯಲಾಗುತ್ತದೆ ಮತ್ತು ಬಲಿಪಾಡ್ಯದ ಮರುದಿನ ಬೆಳಗ್ಗೆ ದೇವಸ್ಥಾನದ ಬಾಗಿಲನ್ನು ಮುಚ್ಚುತ್ತಾರೆ.

ದೇವಸ್ಥಾನದ ಬಾಗಿಲನ್ನು ಮುಚ್ಚುವ ದಿನ ದೇವಿಯರಿಗೆ ಬಳೆ, ಅರಶಿನ, ಕುಂಕುಮ, ಹೂವು ಮುಂತಾದ ಮಂಗಳದ್ರವ್ಯಗಳನ್ನು ಅರ್ಪಿಸಿ ನಂದಾದೀಪವನ್ನು ಉರಿಸಿಡುತ್ತಾರೆ. ಮುಂದಿನ ವರ್ಷ ದೇವಸ್ಥಾನದ ಬಾಗಿಲು ತೆಗೆಯುವವರೆಗೆ ಹೂವು ಬಾಡದೇ ನಂದಾದೀಪ ನಂದದೇ ಹಾಗೆಯೇ ಉರಿಯುತ್ತಿರುತ್ತದೆ. ಆಕಸ್ಮಿಕ ನಂದಾದೀಪ ಆರಿ, ಹೂವು ಬಾಡಿದ್ದಲ್ಲಿ ಆ ವರ್ಷ ದೇಶಕ್ಕೆ ಆಪತ್ತು ಸಂಭವಿಸುವ ಸೂಚನೆಯಾಗಿರುತ್ತದೆ.

ಹಿಂದೆಲ್ಲಾಈ ದೇವರ ಎದುರು ೩ ಬುಟ್ಟಿಯಲ್ಲಿ ಅನ್ನವನ್ನು ಮಾಡಿ ಇಡಲಾಗುತ್ತಿತ್ತು. ಆ ಸಮಯದಲ್ಲಿ ಅನ್ನವು ಹಾಳಾಗದೆ ಬಿಸಿಯಾಗಿರುತ್ತಿತ್ತು ಮತ್ತು ಅದನ್ನೇ ದೇವರ ಪ್ರಸಾದವೆಂದು ಬಡಿಸಲಾಗುತ್ತಿತ್ತು. ಈಗ ಆ ಪದ್ಧತಿಯೂ ಕ್ರಮೇಣ ನಿಂತುಹೋಯಿತು.


***

ಸಪ್ತಮಾತೆಯರು ಕಾಶಿಯಿಂದ ದಕ್ಷಿಣದ ಕಡೆಗೆ ಆಕಾಶಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದಾಗ ಹಾಸನದ ಮನೋಹರವಾದ ಸೌಂದರ್ಯಕ್ಕೆ ಮನಸೋತು ಇಲ್ಲಿಯೇ ನೆಲೆನಿಂತರು. ಆ ಸಪ್ತಮಾತೆಯರಾದ ಬ್ರಾಹ್ಮದೇವಿ, ಮಾಹೇಶ್ವರಿ, ಕೌಮಾರಿ, ವೈಷ್ಣವೀ, ವಹಾಹಿಣಿ, ಇಂದ್ರಾಣಿ ಮತ್ತು ಚಾಮುಂಡಿ ಇವರಲ್ಲಿ ವೈಷ್ಣವಿ, ಕೌಮಾರಿ, ಮಾಹೇಶ್ವರೀ, ದೇವಿಯರು ದೇವಸ್ಥಾನದಲ್ಲಿ ಹುತ್ತದ ರೂಪದಲ್ಲಿ ಹಾಗೂ ವಹಾಹಿಣಿ, ಇಂದ್ರಾಣಿ, ಚಾಮುಂಡಿ ನಗರದ ಮಧ್ಯಭಾಗದಲ್ಲಿರುವ ದೇವಿಗೆರೆಯಲ್ಲಿ (ಕೆರೆ) ನೆಲೆಸಿರುವರು. ಬ್ರಾಹ್ಮದೇವಿಯು ಹಾಸನದಿಂದ ಸುಮಾrvedರು ೩೫ ಕಿ.ಮೀ. ದೂರದಲ್ಲಿರುವ ಕೆಂಚಮ್ಮ ಹೊಸಕೋಟೆಯಲ್ಲಿ ಕೆಂಚಾಂಬೆಯ ಹೆಸರಿನಲ್ಲಿ ನೆಲೆಸಿದ್ದಾಳೆ.

***

ಓರ್ವ ಸೊಸೆಗೆ ಅತ್ತೆಯು ಬಹಳಷ್ಟು ಕಷ್ಟ ಕೊಡುತ್ತಿದ್ದಳು. ಆ ಸೊಸೆಯು ಪ್ರತಿನಿತ್ಯ ದೇವಸ್ಥಾನಕ್ಕೆ ಬಂದು ದೇವರ ಬಳಿ ಮಾತನಾಡುತ್ತಿದ್ದಳು. ದೇವತೆಯರು ಅವಳಿಗೆ ಪ್ರತ್ಯಕ್ಷರಾಗಿ ಮಾತನಾಡಿಸುತ್ತಿದ್ದರು ಮತ್ತು ಈ ವಿಷಯವನ್ನು ಯಾರ ಬಳಿಯೂ ಹೇಳಬಾರದೆಂದು ದೇವಿಯರು ಸೊಸೆಗೆ ಹೇಳಿದ್ದರು. ಒಂದು ದಿನ ಸೊಸೆ ಅಮ್ಮ ನವರ ದರ್ಶನ ಪಡೆಯಲು ಹೊರಟಾಗ, ಅತ್ತೆಯು ಅವಳನ್ನು ಹಿಂಬಾಲಿಸಿ, ಬಂದು ನೋಡಿದಾಗ ಅಮ್ಮನವರ ಮುಂದೆ ನಿಂತು ಧ್ಯಾನ ಮಗ್ನಳಾಗಿದ್ದ ಸೊಸೆಯನ್ನು ಕಂಡು ಕೋಪದಿಂದ ಅತ್ತೆಯು ಮನೆಯ ಕೆಲಸ ಕಾರ್ಯಗಳಿಗಿಂತ ಅಮ್ಮನವರ ದರ್ಶನ ಹೆಚ್ಚಾಯಿತೆ! ಎಂದು ದೇವಿಯ ಮುಂಭಾಗದಲ್ಲಿದ್ದ ಚಂದ್ರ ಬಟ್ಟಲನ್ನು ತೆಗೆದುಕೊಂಡು ತಲೆಯ ಮೇಲೆ ಕುಟ್ಟಿದಾಗ ನೋವನ್ನು ತಾಳಲಾರದೆ ಸೊಸೆಯು ‘ಅಮ್ಮ ಹಾಸನಾಂಬೆ’ ಎಂದು ಕೂಗಿದಾಗ ಭಕ್ತಳ ಕಷ್ಟವನ್ನು ನೋಡಿ ಅವಳ ಭಕ್ತಿಗೆ ಮೆಚ್ಚಿ ನನ್ನ ಸನ್ನಿಧಿಯಲ್ಲೇ ಯಾವಾಗಲೂ ಕಾಣುವಂತಿರು ಎಂದು ಹರಸಿದ್ದರಿಂದ ಸೊಸೆಯು ಕಲ್ಲಾಗಿ ಬಿಟ್ಟಳು. ಆ ಕಲ್ಲು ಈಗಲೂ ಕಾಣಿಸಲು ಸಿಗುವುದು ಮತ್ತು ಆ ಕಲ್ಲು ವರ್ಷದಿಂದ ವರ್ಷಕ್ಕೆ ಭತ್ತದ ಕಾಳಿನ ಮೊನೆಯಷ್ಟು ಚಲಿಸುತ್ತದೆ ಮತ್ತು ಅದು ಸಂಪೂರ್ಣ ಚಲಿಸಿ ದೇವಿಯರ ಪಾದ ತಲುಪಿದ ದಿನ ಕಲಿಯುಗದ ಅಂತ್ಯವಾಗುತ್ತದೆ.