Saturday, November 24, 2018

ನಮ್ಮಲ್ಲಿನ ಸ್ಥಳ ಪುರಾಣಗಳು (Mythes) -97

ಶ್ರೀಕ್ಷೇತ್ರ ಧರ್ಮಸ್ಥಳ (Dharmasthala)

ಕರ್ನಾಅಕದಲ್ಲಷ್ಟೇ ಅಲ್ಲದೆ ನೆರೆ ರಾಜ್ಯ ಕೇರಳದಲ್ಲಿ ಸಹ ಮನೆಮಾತಾಗಿರುವ ಸತ್ಯ, ಧರ್ಮನ್ಯಾಯಕ್ಕೆ ಹೆಸರಾದ ಕ್ಷೇತ್ರ ಧರ್ಮಸ್ಥಳಕ್ಕೆ ನೂರಾರು ವರ್ಷದ ಇತಿಹಾಸವಿದೆ. ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಎಲ್ಲಾ ದೈವಗಳ ಅಧಿಪತಿಯಾಗಿದ್ದು ಇವನೊಂದಿಗಿನ ಧರ್ಮದೇವತೆಗಳು ಇಲ್ಲಿನ ಹೆಗ್ಗಡೆಗಳ ಆದೇಶವನ್ನು ಪಾಲಿಸುತ್ತಾರೆ  ಇಂತಹಾ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ ದಕ್ಷಿಣ ಭಾರತೀಯರ ಆರಾಧ್ಯ ಕ್ಷೇತ್ರವಾಗಿದೆರ್ಮಸ್ಥಳವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಂದು ಪ್ರಸಿದ್ಧ ಧಾರ್ಮಿಕ ತಾಣ.

ಶ್ರೀ ಮಂಜುನಾಥ ಸ್ವಾಮಿ


ನೇತ್ರಾವತಿ ನದಿಯ ದಡದಲ್ಲಿ  ನೆಲೆಯಾಫ಼್ದ ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿ ವಿಗ್ರಹವನ್ನು  ಮಂಗಳೂರಿನ ಕದ್ರಿ ಎಂಬ ಸ್ಥಳದಿಂದ ಉಡುಪಿಯ ಯತಿಗಳಾಗಿದ್ದ ಶ್ರೀ ವಾದಿರಾಜರು ಸ್ವತಃ ತಂದು ಪ್ರತಿಷ್ಠಾಪಿಸಿದರು ಎಂದು ಪುರಾಣಗಳು ಹೇಳುತ್ತವೆ. ಧರ್ಮಸ್ಥಳ ದಾನ ಧರ್ಮಕ್ಕೆ ಪ್ರಸಿದ್ಧವಾಗಿರುವುದಲ್ಲದೆ, ಭಕ್ತರಿಗೆ ನೈತಿಕ - ಸಾಂಸ್ಕೃತಿಕ ಕೇಂದ್ರವಾಗಿಯೂ ಆಕರ್ಷಿಸುತ್ತದೆ.

ಧರ್ಮಸ್ಥಳವು ದಕ್ಷಿಣ ಕನ್ನಡದ ಮಲೆನಾಡು ಪ್ರದೇಶದಲ್ಲಿದೆ.ಜಿಲ್ಲಾ ಕೇಂದ್ರವಾದ ಮಂಗಳೂರಿನಿಂದ 75 ಕಿ.ಮೀ.ದೂರದಲ್ಲಿದೆ.ಮಂಗಳೂರಿಗೆ ದೇಶದ ಎಲ್ಲಾ ಭಾಗಗಳಿಂದ ರಸ್ತೆ,ರೈಲು ಮತ್ತು ವಿಮಾನ ಯಾನ ಸೌಕರ್ಯಗಳಿದ್ದು ಧರ್ಮಸ್ಥಳಕ್ಕೆ ಕೂಡಾ ಉತ್ತಮ ಸಾರಿಗೆ ಸೌಕರ್ಯಗಳಿವೆ. ಧರ್ಮಸ್ಥಳವು ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಉಜಿರೆಯಿಂದ ಕೇವಲ 9 ಕಿ.ಮೀ ದೂರದಲ್ಲಿದೆ.ಬೆಂಗಳೂರಿನಿಂದ ಶಿರಾಡಿ ಘಾಟಿಯಾಗಿ ರಸ್ತೆಯಲ್ಲಿ ಹಾಗೂ ರೈಲಿನಲ್ಲಿ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಇಲ್ಲಿಗೆ ಆಗಮಿಸಬಹುದಾಗಿದೆ. ಇಲ್ಲಿಂದ ಸಮೀಪದ ಇತರ ಯಾತ್ರಾಕ್ಷೇತ್ರಗಳಾದ ಸುಬ್ರಹ್ಮಣ್ಯ,ಉಡುಪಿ,ಕೊಲ್ಲೂರು,ಕಟೀಲು ಮುಂತಾದೆಡೆಗೆ ಹೇರಳ ಸಾರಿಗೆ ಸೌಕರ್ಯವಿದೆ.

***

ಧರ್ಮಸ್ಥಳವು ರೋಚಕವಾದ ಹಿನ್ನೆಲೆಯನ್ನು ಹೊಂದಿದೆ. ಹಿಂದೆ ಧರ್ಮಸ್ಥಳವನ್ನು "ಕುಡುಮ" ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಈ ಪ್ರಾಂತ್ಯದಲ್ಲಿರುವ ನೆಲ್ಯಾಡಿ ಬೀಡು ಎಂಬ ಗೃಹದಲ್ಲಿ ಭೀಮಣ್ಣ ಪರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ದಂಪತಿಗಳು ವಾಸಿಸುತ್ತಿದ್ದರು. ಇವರ ಮನೆಗೆ ಬಂದ ನಾಲ್ವರು ಅತಿಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ದಂಪತಿಗಳು ನೋಡಿಕೊಂಡಿದ್ದರು. ಅದೇ ದಿನ ರಾತ್ರಿಯಲ್ಲಿ ಆ ನಾಲ್ವರು ಅತಿಥಿಗಳು ದೈವದ ರೂಪದ ಮೂಲಕ ಭೀಮಣ್ಣನವರ ಕನಸಿನಲ್ಲಿ ಬಂದು ತಾವು ಇಲ್ಲಿ ನೆಲೆಸಲು ಇಚ್ಛಿಸಿರುವುದಾಗಿ ತಿಳಿಸಿದರು. ಆ ನಾಲ್ವರು ದೇವತೆಗಳಿಗೆ ಅಣತಿಯಂತೆ ಮನೆಯನ್ನು ಬಿಟ್ಟುಕೊಟ್ಟ ಭೀಮಣ್ಣ ಎಂಬುವರು ದೇವಾಲಯ ನಿರ್ಮಿಸಿ ಬ್ರಾಹ್ಮಣ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಿದಂತೆ. ಆ ನಾಲ್ಕು ದೈವವೆಂದರೆ ಕಾಳರಾಹು - ಪುರುಷ ದೈವ, ಕಳರ್ಕಾಯಿ - ಸ್ತ್ರೀ ದೈವ, ಕುಮಾರಸ್ವಾಮಿ - ಪುರುಷ ದೈವ, ಹಾಗೂ ಕನ್ಯಾಕುಮಾರಿ - ಸ್ತ್ರೀ ದೈವ. ದಿನ ಕಳೆದಂತೆ ಅರ್ಚಕರು ಗುಡಿಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸುವಂತೆ ಭೀಮಣ್ಣನವರಿಗೆ ಸಲಹೆಯಿತ್ತರು. ಇದರಂತೆ ಧರ್ಮದೇವತೆಗಳೂ ಕೂಡ ಕದ್ರಿಯಲ್ಲಿರುವ ಶ್ರೀಮಂಜುನಾಥನ ಲಿಂಗವನ್ನು ತಂದು ಪ್ರತಿಷ್ಠಾಪಿಸುವಂತೆ ತಿಳಿಸಿದರು ಹಾಗೂ ಈ ಕಾರ್ಯ ಸಂಪನ್ನಗೊಳಿಸಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು. ಅಣ್ಣಪ್ಪಸ್ವಾಮಿಯವರು ಕದ್ರಿಗೆ ತೆರಳಿ ಅಲ್ಲಿಂದ ಶಿವಲಿಂಗವನ್ನು ಇಲ್ಲಿಗೆ ತರುವುದರೊಳಗೆ ಧರ್ಮಸ್ಥಳದ ಶ್ರೀಮಂಜುನಾಥನ ದೇವಾಲಯ ನಿರ್ಮಾಣವಾಗಿತ್ತೆಂದು ಹೇಳುತ್ತದೆ ಇಲ್ಲಿನ ಪ್ರತೀತಿ.

ಮತ್ತೊಂದು ದಂತಕಥೆಯ ಪ್ರಕಾರ, 16 ನೇಯ ಶತಮಾನದಲ್ಲಿ ದೇವಾರಜ ಹೆಗ್ಗಡೆಯವರು ಉಡುಪಿಯ ವಾದಿರಾಜರಿಗೆ ಇಲ್ಲಿಗೆ ಭೇಟಿ ನೀಡಲು ಅಹ್ವಾನಿಸಿದ್ದರು. ಮೊದಲೆ ದಾನ ಧರ್ಮಗಳಿಗೆ ಹೆಸರಾಗಿದ್ದ ಕುಡುಮ ಕ್ಷೇತ್ರಕ್ಕೆ ವಾದಿರಾಜರು ಭೇಟಿ ನೀಡಲು ಸಂತೋಷದಿಂದ ಒಪ್ಪಿದರು ಹಾಗೂ ಭೇಟಿಯೂ ನೀಡಿದರು. ನಂತರ ಧರ್ಮದೂಟ ಸ್ವೀಕರಿಸಲು ಒಪ್ಪಲಿಲ್ಲ. ಕಾರಣವೆಂದರೆ ಅಲ್ಲಿರುವ ಶಿವಲಿಂಗವು ವೈದಿಕ ಸಂಪ್ರದಾಯದಂತೆ ಪ್ರತಿಷ್ಠಾಪಿಸಲಾಗಿರಲಿಲ್ಲ ಎನ್ನುವುದು ಅವರ ಅಭಿಪ್ರಾಯವಾಗಿತ್ತು. ಈ ಸಂದರ್ಭದಲ್ಲಿ ಸ್ವತಃ ದೇವರಾಜ ಹೆಗ್ಗಡೆಯವರೆ ವಾದಿರಾಜರನ್ನು ಕುರಿತು ನಿಯಮಗಳಿಗನುಸಾರವಾಗಿ ಲಿಂಗವನ್ನು ತಾವೆ ಮರುಪ್ರತಿಷ್ಠಾಪಿಸಬೇಕೆಂದು ವಿನಂತಿಸಿಕೊಂಡರು. ಅವರ ವಿನಯತೆ, ದಾನ ಧಾರ್ಮಗಳ ಮನೋಭಾವದಿಂದ ಪ್ರಸನ್ನರಾದ ಯತಿಗಳು ಸ್ವತಃ ತಾವೆ ದೈವಿಕ ವಿಧಿ ವಿಧಾನಗಳ ಮೂಲಕ ಶಿವಲಿಂಗವನ್ನು ಪ್ರತಿಷ್ಠಾಪಿಸಿದರು ಹಾಗೂ ನೈತಿಕತೆ, ಸರಳತೆ, ಧರ್ಮ ನೆಲೆಯೂರಿರುವ ಈ ಕ್ಷೇತ್ರಕ್ಕೆ ಧರ್ಮಸ್ಥಳ ಎಂಬ ನಾಮಕರಣ ಮಾಡಿದರು. ಅಂದಿನಿಂದ ಈ ಕ್ಷೇತ್ರವು ಶ್ರೀಕ್ಷೇತ್ರ ಧರ್ಮಸ್ಥಳವಾಗಿ ಜನಪ್ರಿಯವಾಗಿದೆ.

No comments:

Post a Comment