Friday, March 22, 2019

ನಮ್ಮಲ್ಲಿನ ಸ್ಥಳ ಪುರಾಣಗಳು (Mythes) -99


ಮದುರೈ(Madurai)


ಭಾರತ ಪರ್ಯಾಯ ದ್ವೀಪದ ಅತ್ಯಂತ ಹಳೆಯ ನಗರ ಇದು ದಕ್ಷಿಣ ಭಾರತದ ತಮಿಳು ನಾಡು ರಾಜ್ಯದಲ್ಲಿರುವ ನಗರ ಮತ್ತು 2ನೆಯ ಅತ್ಯಂತ ದೊಡ್ಡ ನಗರ ಇದು ವೈಗಾಯ್ ನದಿಯ ತೀರದಲ್ಲಿ ಸ್ಥಿತವಾಗಿದೆ. ಮದುರೈ ನಗರವನ್ನು ಅನೇಕ ಅಡ್ಡ ಹೆಸರುಗಳಿಂದ ಕರೆಯಲಾಗುತ್ತದೆ. ಇವುಗಳು ದೇಗುಲ ನಗರಿ, ಕೂಡಲ್ ಮಾನಗರ್(ತಮಿಳು ನಾಡಿನ ಸಾಂಸ್ಕೃತಿಕ ನಗರಿ), ಮಲ್ಲಿಗೈ ಮಾನಗರ್ (ಮಲ್ಲಿಗೆ ನಗರ), ಥೂಂಗ ನಗರಂ (ನಿದ್ದೆಯಿಲ್ಲದಿರುವ ನಗರ) ಮತ್ತು ಪೂರ್ವದ ಅಥೆನ್ಸ್. ಇದು ಮದುರೈ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ 2001ರ ಜನಗಣತಿಯ ಪ್ರಕಾರ 1,203,095ರಷ್ಟು ಜನಸಂಖ್ಯೆ ಇದೆ. ನಗರವು ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದುದಲ್ಲದೇ ಕ್ರಿಸ್ತ ಪೂರ್ವ 550 ಳಷ್ಟು ಪ್ರಾಚೀನ ಕಾಲದಿಂದ ರೋಮ್‌ ಮತ್ತು ಗ್ರೀಸ್‌ ರಾಷ್ಟ್ರಗಳ ಜೊತೆಗೆ ಸಂಪರ್ಕವಿರಿಸಿಕೊಂಡಿತ್ತು.

ಪಾಂಡ್ಯರ ರಾಜಧಾನಿಯಾಗಿದ್ದ ಮದುರೈ  ಸಂಗಮ್‌ ಅವಧಿಯ ಕವಿ ನಕ್ಕೀರರ್‌ರನ್ನು ಸುಂದರೇಶ್ವರರ್‌‌ನ ತಿರುವಿಲಾಯದಲ್‌ ಉಪಕಥೆಗಳೊಡನೆ ಸಂಬಂಧಿಸಿ ಹೇಳಲಾಗುತ್ತದೆ. ಇವುಗಳನ್ನು ಈಗಲೂ ದೇಗುಲಗಳ ಸಾಂಪ್ರದಾಯಿಕ ಜಾತ್ರೆ/ಉತ್ಸವಗಳಲ್ಲಿ ಇಟ್ಟು ಪೂಜಿಸಲಾಗುತ್ತದೆ 3ನೇ ಶತಮಾನ BCಯಷ್ಟು ಪ್ರಾಚೀನ ಕಾಲದಲ್ಲಿ ಮೆಗಾಸ್ತನೀಸ್‌ ಮಧುರೈ ನಗರಕ್ಕೆ ಭೇಟಿ ನೀಡಿದ್ದ. ನಂತರ ರೋಮ್‌ ಮತ್ತು ಗ್ರೀಸ್‌ ದೇಶಗಳಿಂದ ಅನೇಕರು ಮಧುರೈಗೆ ಭೇಟಿ ನೀಡಿದ್ದಲ್ಲದೇ ಪಾಂಡ್ಯ ಅರಸರೊಡನೆ ವಾಣಿಜ್ಯ ವ್ಯವಹಾರಗಳನ್ನು ಆರಂಭಿಸಿದ್ದರುಪಾಂಡ್ಯರ ರಾಜಧಾನಿಯಾಗಿದ್ದ ಮದುರೈ  ಸಂಗಮ್‌ ಅವಧಿಯ ಕವಿ ನಕ್ಕೀರರ್‌ರನ್ನು ಸುಂದರೇಶ್ವರರ್‌‌ನ ತಿರುವಿಲಾಯದಲ್‌ ಉಪಕಥೆಗಳೊಡನೆ ಸಂಬಂಧಿಸಿ ಹೇಳಲಾಗುತ್ತದೆ. ಇವುಗಳನ್ನು ಈಗಲೂ ದೇಗುಲಗಳ ಸಾಂಪ್ರದಾಯಿಕ ಜಾತ್ರೆ/ಉತ್ಸವಗಳಲ್ಲಿ ಇಟ್ಟು ಪೂಜಿಸಲಾಗುತ್ತದೆ 3ನೇ ಶತಮಾನ BCಯಷ್ಟು ಪ್ರಾಚೀನ ಕಾಲದಲ್ಲಿ ಮೆಗಾಸ್ತನೀಸ್‌ ಮಧುರೈ ನಗರಕ್ಕೆ ಭೇಟಿ ನೀಡಿದ್ದ. ನಂತರ ರೋಮ್‌ ಮತ್ತು ಗ್ರೀಸ್‌ ದೇಶಗಳಿಂದ ಅನೇಕರು ಮಧುರೈಗೆ ಭೇಟಿ ನೀಡಿದ್ದಲ್ಲದೇ ಪಾಂಡ್ಯ ಅರಸರೊಡನೆ ವಾಣಿಜ್ಯ ವ್ಯವಹಾರಗಳನ್ನು ಆರಂಭಿಸಿದ್ದರು

ಇಂತಹಾ ನಗರದಲ್ಲಿ  ಮೀನಾಕ್ಷಿ ಸುಂದರೇಶ್ವರರ್ ದೇವಸ್ಥಾನ ಅಥವಾ ಮೀನಾಕ್ಷಿ ಅಮ್ಮನ್ ದೇವಸ್ಥಾನವು  ಒಂದು ಐತಿಹಾಸಿಕ ಹಿಂದು ದೇವಾಲಯವಾಗಿದೆ. ಇದು ಶಿವ ದೇವರಿಗೆ (ಸುಂದರೇಶ್ವರರ್‌ ಅಥವಾ ಸುಂದರ ದೇವರ ರೂಪದಲ್ಲಿ) ಮತ್ತು ಅವನ ಪತ್ನಿ ಪಾರ್ವತಿಗೆ (ಮೀನಾಕ್ಷಿ ರೂಪದಲ್ಲಿ) ಸಮರ್ಪಿತವಾಗಿದೆ. ಈ ದೇವಸ್ಥಾನವು ೨೫೦೦ ವರ್ಷ ಪುರಾತನ ನಗರ ಮಧುರೈನ ಹೃದಯಭಾಗ ಮತ್ತು ಜೀವಾಧಾರವಾಗಿದೆ. 

ಸೂಕ್ಷ್ಮಪರಿಶೀಲನೆಯಿಂದ ಕೆತ್ತಿದ ಮತ್ತು ಬಣ್ಣಬಳಿದ ಪ್ರಮುಖ ದೇವರುಗಳಿರುವ ಎರಡು ಬಂಗಾರದ ಗೋಪುರಗಳನ್ನೂ ಒಳಗೊಂಡಂತೆ ಈ ಸಂಕೀರ್ಣವು ೧೪ ಭವ್ಯವಾದ ಗೋಪುರಗಳನ್ನು ಹೊಂದಿದೆ. ಈ ದೇವಸ್ಥಾನವು ತಮಿಳರ ಮಹತ್ವಪೂರ್ಣ ಸಂಕೇತವಾಗಿದೆ, ಹಾಗೂ ಪ್ರಾಚೀನ ಕಾಲದಿಂದ ತಮಿಳು ಸಾಹಿತ್ಯದಲ್ಲಿ ಸೂಚಿಸಲ್ಪಟ್ಟಿದೆ. ಆದರೆ ಪ್ರಸ್ತುತವಿರುವ ರಚನೆಯನ್ನು ೧೬೦೦ರಲ್ಲಿ ನಿರ್ಮಿಸಿರುವುದೆಂದು ನಂಬಲಾಗಿದೆ. ದೇವಸ್ಥಾನದ ಗೋಪುರವು 51.9 ಮೀಟರ್ )ನಷ್ಟು ಎತ್ತರವಿದೆ.



ಜಗತ್ತಿನ ಅತಿ ಪ್ರಾಚೀನ ಪಟ್ಟಣಗಳ ಪೈಕಿ ಮದುರೈ ಸಹ ಒಂದು. 2,500 ವರ್ಷಗಳಷ್ಟು ಇತಿಹಾಸವಿರುವ, ಎಂದಿಗೂ ನಿದ್ರಿಸಲಾರದ ಎಂಬ ಬಿರುದು ಪಡೆದ್ರುವ ಈ ನಗರದ ಮುಖ್ಯ ಹೆಗ್ಗುರುತಾಗಿದೆ ಮೀನಾಕ್ಷಿ ಅಮ್ಮನವರ ದೇವಾಲಯ. ಅಲ್ಲದೆ ತಮಿಳಿನ ಅತಿ ಪುರಾತನ ಸಾಹಿತ್ಯದಲ್ಲಿ ಈ ದೇವಾಲಯದ ಕುರಿತು ಉಲ್ಲೇಖವಿದೆ. ಹೀಗಾಗಿ ತಮಿಳಿಗರಿಗೆ ಸಾಕಷ್ಟು ಮಹತ್ವವಾಗಿದೆ

***

ಮೀನು ಹಾಗೂ ಅಕ್ಷಿಗಳ ಸಮಾಗಮದಿಂದ ವ್ಯುತ್ಪತ್ತಿಯಾದ ಮೀನಾಕ್ಷಿ ಪದವು ಮೀನಿನಂತೆ ಕಣ್ಣುಗಳುಳ್ಳ ಎಂಬ ವಿವರಣೆಯನ್ನು ನೀಡುತ್ತದೆ. ಅಂದರೆ ಮೀನಾಕ್ಷಿ ದೇವಿಯು ಮೀನಿನಂತೆ ಕಣ್ಣುಗಲಿಂದ ಕಂಗೊಳಿಸುವ ಸುಂದರ ಸ್ತ್ರೀಯಾಗಿ ಕಂಡುಬರುತ್ತಾಳೆ. ಅಲ್ಲದೆ ಇಲ್ಲಿ ಎಲ್ಲೆಡೆ ಸಾಮಾನ್ಯವಾಗಿ ಕಂಡುಬರುವಂತೆ ಶಿವನು ಮುಖ್ಯ ದೇವನಾಗಿರದೆ ಮೀನಾಕ್ಷಿ ದೇವಿಯೆ ಪ್ರಧಾನ ದೇವತೆಯಾಗಿರುವುದು ವಿಶೇಷ.

ಹಿಂದೆ ಮಲಯಧ್ವಜ ಪಾಂಡ್ಯ ರಾಜನ ಪತ್ನಿಯಾದ ಕಂಚನಮಲೈಳಿಗೆ ಹಿಂದಿನ ಜನ್ಮದಲ್ಲಿ ಕನಸೊಂದರಲ್ಲಿ ಸ್ವತಃ ಪಾರ್ವತಿಯೆ ಪ್ರತ್ಯಕ್ಷಳಾಗಿ ಅವಳು ಮುಂದಿನ ಜನ್ಮದಲ್ಲಿ ದೇವಿಯೊಬ್ಬಳ ತಾಯಿಯಾಗುತ್ತಾಳೆಂದು ಹೇಳಿದ್ದಳಂತೆ.

ಅದರಂತೆ ಮುಂದೆ ಕಾಂಚನಮಲೈ ಮಲಯಧ್ವಜನ ಮಡದಿಯಾಗಿ ಸಂತಾನ ಬಯಸುತ್ತಿರುವಾಗ ರಾಜನು ಪುತ್ರ ಕಾಮೇಷ್ಠಿ ಯಜ್ಞವನ್ನು ನಡೆಸುತ್ತಾನೆ. ಆ ಯಜ್ಞ ನಡೆಸುತ್ತಿರುವಾಗ ಅಗ್ನಿಯಿಂದ ಪಾರ್ವತಿ ದೇವಿಯು ಹುಡುಗಿಯ ರೂಪದಲ್ಲಿ ಹೊರಬರುತ್ತಾಳೆ. ವಿಚಿತ್ರವೆಂದರೆ ಆ ಹುಡುಗಿಗೆ ಎರಡರ ಬದಲು ಮೂರು ಸ್ತನಗಳಿರುತ್ತವೆ.
ಇದನ್ನು ಕಂಡು ರಾಜ ಅಚ್ಚರಿ ಪಡುವಾಗ, ಅಶರೀರವಾಣಿಯೊಂದು ಆಗಸದಿಂದ "ಎಲೈ ರಾಜನೆ ಹುಡುಗಿಯ ಈ ರೀತಿಯ ಅಸ್ವಾಭಾವಿಕ ದೇಹರಚನೆಗೆ ಚಿಂತಿಸಬೇಕಾಗಿಲ್ಲ, ಅವಳು ತನ್ನ ಬಾಳಿನ ಪತಿಯನ್ನು ಕಂಡೊಡನೆಯೆ ಮೂರನೇಯ ಸ್ತನ ತನ್ನಿಂದ ತಾನೆ ಅಳಿಸಿ ಹೋಗುತ್ತದೆ". ಹೀಗಾಗಿ ರಾಜ ಯಾವ ಚಿಂತೆ ಮಾಡದೆ ಪುತ್ರಿಗೆ ತಡಾತಗೈ ಎಂಬ ನಾಮಕರಣ ಮಾಡಿ ಅತಿ ಪ್ರೀತಿಯಿಂದ ಬೆಳೆಸುತ್ತಾನೆ.

ಮೊದಲೆ ಹುಡುಗಿಯು ಪಾರ್ವತಿಯ ಮರು ಅವತಾರ. ಹೀಗಾಗಿ ಸಕಲ ಶಸ್ತ್ರಾದಿಗಳನ್ನು, ಯುದ್ಧ ವಿದ್ಯೆಗಳನ್ನು ಅತಿ ಸರಾಗವಾಗಿ ಹಾಗೂ ಅಷ್ಟೆ ಪರಿಣಾಮಕಾರಿಯಾಗಿ ಕಲೆಯುತ್ತಾಳೆ. ಹೀಗೆ ಬೆಳೆದ ತಡಾತಗೈ ನಾಲ್ಕು ಲೋಕಗಳಾದ ಬ್ರಹ್ಮಲೋಕ, ವೈಕುಂಠ, ಅಮರಾವತಿ ಹಾಗೂ ಕೈಲಾಸಗಳನ್ನು ವಶಪಡಿಸಿಕೊಳ್ಳುಲು ಮುನ್ನುಗುತ್ತಾಳೆ.

 ತಡಾತಗೈ ಪಾರ್ವತಿಯ ಅವತಾರವೆ ಆಗಿರುವುದರಿಂದ ಎಲ್ಲ ಮೂರು ಲೋಕಗಳನ್ನು ಅತಿ ಸುಲಭವಾಗಿ ಗೆದ್ದು ಕೊನೆಯದಾಗಿ ಕೈಲಾಸಕ್ಕೆ ತೆರಳುತ್ತಾಳೆ. ಅಲ್ಲಿಯೂ ಸಹ ಭೂತ ಗಣರನ್ನು, ನಂದಿಯನ್ನು ಬಲು ಸುಲಭವಾಗಿ ಸೋಲಿಸುತ್ತಾಳೆ. ಕೊನೆಯದಾಗಿ ಶಿವನನ್ನು ಗೆಲ್ಲಲು ಅವನ ಹತ್ತಿರ ತೆರಳಿದಾಗ ಅವಳಿಗೆ ಏನೂ ಮಾಡಲಾಗದೆ ಶಿವನಲ್ಲಿ ಪ್ರೀತಿಯುಂಟಾಗಿ ನಾಚಿಕೊಂಡು ಬಿಡುತ್ತಾಳೆ. ತತ್ ಕ್ಷಣವೆ ಅವಳ ಮೂರನೇಯ ಸ್ತನವು ಮಾಯವಾಗಿ ಹೋಗುತ್ತದೆ. ಇದರಿಂದ ಶಿವನೆ ತನ್ನ ಪತಿಯೆಂಬ ಸತ್ಯ ತಿಳಿದು ಶಿವನೊಡನೆ ಮದುವೆಯಾಗಲು ಮದುರೈಗೆ ಆಗಮಿಸುತ್ತಾಳೆ ತಡಾತಗೈ. ಕೊನೆಯಲ್ಲಿ ಇವರಿಬ್ಬರ ಮದುವೆಯು ಸಕಲ ದೇವರುಗಳ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯುತ್ತದೆ. ವಿಷ್ಣು ಮೀನಾಕ್ಷಿಯ ತಮ್ಮನಾಗಿ ಈ ಮದುವೆಯನ್ನು ನಡೆಸಿಕೊಡುತ್ತಾನೆ. ನಂತರ ಶಿವನು ಸುಂದರೇಶ್ವರನಾಗಿಯೂ, ತಡಾತಗೈ ಮೀನಾಕ್ಷಿಯಾಗಿಯೂ ಮದುರೈನಲ್ಲಿ ನೆಲೆಸುತ್ತಾರೆ.
 ಇಂದಿಗೂ ಪ್ರತಿ ದಿನ ರಾತ್ರಿ ದೇವಾಲಯ ಮುಚ್ಚುವ ಮೊದಲು ಸುಂದರೇಶ್ವರನ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಿಯ ಕೊಣೆಗೆ ಕೊಂಡೊಯ್ಯಲಾಗುತ್ತದೆ. ಇದು ಅವರಿಬ್ಬರ ಮಿಲನದ ಸಂಕೇತವಾಗಿದೆ. ನಂತ್ರ ಮರು ದಿನ ನಸುಕಿನ ಜಾವದಲ್ಲಿ ಸುಂದರೇಶ್ವರನನ್ನು ದೇವಿಯ ಕೋಣೆಯಿಂದ ಮತ್ತೆ ಮರಳಿ ತರಲಾಗುತ್ತದೆ.

ವರ್ಷದಲ್ಲಿ ಇವರಿಬ್ಬರ ಕಲ್ಯಾಣ ಮಹೋತ್ಸವವನ್ನು ಬಲು ಸಡಗರದಿಂದ ಆಚರಿಸಲಾಗುತ್ತದೆ. ಈ ಉತ್ಸವ ಸಾಮಾನ್ಯವಾಗಿ ಎಪ್ರಿಲ್-ಮೇ ಸಂದರ್ಭದಲ್ಲಿ ಜರುಗುತ್ತದೆ. ಈ ಸಂದರ್ಭದಲ್ಲಿ ಈ ಕ್ಷೇತ್ರಕ್ಕೆ ಹತ್ತು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಾರೆ.

***

1812 ರಿಂದ 1828 ರಲ್ಲಿ ಪ್ರಸ್ತುತ ತಮಿಳುನಾಡಿನ ಮದುರೈಗೆ ಕಲೆಕ್ಟರ್ ಆಗಿ ರೋಸ್ ಪೀಟರ್ ಎಂಬ ಬ್ರಿಟೀಷ್ ಕಲೆಕ್ಟರ್ ನೇಮಕಗೊಂಡಿದ್ದರು. ಅವರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿದ್ದರೂ ಸಹ ಹಿಂದೂ ಧರ್ಮಕ್ಕೆ ಹೆಚ್ಚು ಪ್ರಾಧಾನ್ಯ ನೀಡುತ್ತಿದ್ದರು ಮತ್ತು ಸ್ಥಳೀಯ ಪದ್ಧತಿಗಳಿಗೆ ಹೆಚ್ಚು ಗೌರವ ಸೂಚಿಸುತ್ತಿದ್ದರು.

ರೋಸ್ ಪೀಟರ್ ಅವರು ಎಲ್ಲಾ ಧರ್ಮದವರನ್ನು ಒಂದೇ ರೀತಿಯಲ್ಲಿ ಕಾಣುತ್ತಿದ್ದರು ಎಂದು ಹೇಳುತ್ತಾರೆ. ಅವರ ಈ ನಡವಳಿಕೆಯಿಂದಾಗಿ ಅವರ ಹೆಸರು ಹೆಚ್ಚು ಪ್ರಚಲಿತವಾಯಿತು.

ತಮಿಳುನಾಡಿನ ಪ್ರಸಿದ್ಧ ಮೀನಾಕ್ಷಿ ಅಮ್ಮನ ದೇವಸ್ಥಾನವು ಪೀಟರ್ ಅವರ ಮನೆ ಹಾಗೂ ಕಚೇರಿಯ ನಡುವೆ ಇತ್ತು. ಈ ಕಾರಣದಿಂದಾಗಿ ಅವರು ದಿನವೂ ತಮ್ಮ ಕಚೇರಿಗೆ ಹೋಗುವಾಗ ಮೀನಾಕ್ಷಿ ಅಮ್ಮನ ದೇವಸ್ಥಾನದ ಮೂಲಕ ಹಾದು ಹೋಗಬೇಕಾಗಿತ್ತು, ಅವರು ದಿನವೂ ಕುದುರೆಯ ಮೇಲೆ ಹೋಗುತ್ತಿದ್ದರು, ಮೀನಾಕ್ಷಿ ಅಮ್ಮನ ದೇವಸ್ಥಾನ ಬಂದಾಗ, ಅವರು ಕುದುರೆಯಿಂದ ಕೆಳಗಿಳಿದು, ತಮ್ಮ ಹ್ಯಾಟ್ ಮತ್ತು ಶೂಗಳನ್ನು ತೆಗೆದು ತಮ್ಮ ಬರಿಗಾಲಿನಲ್ಲಿಯೇ ನಡೆದುಕೊಂಡು ಹೋಗುತ್ತಿದ್ದರು. ಈ ಮೂಲಕ ಅವರು ಮೀನಾಕ್ಷಿ ಅಮ್ಮನಿಗೆ ತಮ್ಮ ಗೌರವವನ್ನು ಸೂಚಿಸುತ್ತಿದ್ದರು.

ಒಂದು ದಿನ ಮದುರೈ ನಗರದಲ್ಲಿ ಹೆಚ್ಚು ಮಳೆ ಪ್ರಾರಂಭವಾಯಿತು. ಕಲೆಕ್ಟರ್ ಅವರು ತಮ್ಮ ಮನೆಯಲ್ಲಿ ಮಲಗಿದ್ದರು, ಆಕಸ್ಮಿಕವಾಗಿ ಅವರಿಗೆ ಕಾಲಂದಿಗೆಯ ಶಬ್ದದಿಂದ ಎಚ್ಚವಾಯಿತು, ಅವರು ತಮ್ಮ ಹಾಸಿಗೆಯಿಂದ ಎದ್ದು ಶಬ್ದ ಎಲ್ಲಿನಿಂದ ಬರುತ್ತಿದೆ ಎಂದು ನೋಡಿದರು. ಅವರ ಕಣ್ಣಿಗೆ ಒಬ್ಬ ಆಭರಣಗಳನ್ನು ಧರಿಸಿರುವ ಹುಡುಗಿ ಕಾಣಿಸಿತು ಮತ್ತು ಇವರನ್ನು 'ಪೀಟರ್ ಹೊರಗೆ ಬಾ' ಎಂದು ಕರೆಯುತ್ತಿರುವುದು ಕೇಳಿಸಿತು. ಅದನ್ನು ಕೇಳಿಸಿಕೊಂಡು ಅವರು ಮನೆಯಿಂದ ತಕ್ಷಣವೇ ಹೊರಬಂದು ಆ ಓಡುತ್ತಿದ್ದ ಹುಡುಗಿಯನ್ನು ಮಳೆಯಲ್ಲಿಯೇ ಹಿಂಬಾಲಿಸಿದರು. ನಂತರ ತಕ್ಷಣವೇ ಅವರ ಮನೆಯು ಕೆಲವೇ ಕ್ಷಣಗಳಲ್ಲಿ ಕುಸಿದು ಬಿತ್ತು. ನಂತರ ಅವರು ಹಿಂತಿರುಗಿ ನೋಡಿದರೆ ಆ ಹುಡುಗಿ ಓಡುತ್ತಿರುವಂತೆ ಮಾಯವಾದಳು. ಆ ವೇಳೆಯಲ್ಲಿ ಪೀಟರ್ ಅವರು ಆ ಹುಡುಗಿ ಕಾಲಿನಲ್ಲಿ ಅಂದಿಗೆಯೊಂದಿಗೆ ಬರಿಗಾಲಿನಲ್ಲಿ ಯಾವುದೇ ಪಾದುಕೆಗಳಿಲ್ಲದೆಯೇ ಓಡುತ್ತಿರುವುದನ್ನು ಗಮನಿಸಿದರು. ಅವರು ಸಾಕ್ಷಾತ್ ಮೀನಾಕ್ಷಿ ಅಮ್ಮನೇ ತಮ್ಮ ಪ್ರಾಣವನ್ನು ಉಳಿಸಿದಳು ಎಂದು ಅರಿತುಕೊಂಡರು ಮತ್ತು ನಂಬಿದರು.

ಕೆಲವು ದಿನಗಳ ನಂತರ ಮೀನಾಕ್ಷಿ ಅಮ್ಮನಿಗೆ ದೇವಸ್ಥಾನದಲ್ಲಿ ಇಲ್ಲದ ಯಾವುದಾದರೂ ಕಾಣಿಕೆಯನ್ನು ನೀಡಬೇಕೆಂದು ಬಯಸಿದರು. ಇದರ ಕುರಿತು ತಿಳಿದುಕೊಳ್ಳಲು ಅವರು ದೇವಸ್ಥಾನದ ಅರ್ಚಕರ ಬಳಿ ಚರ್ಚಿಸಿ ಒಂದು ಜೊತೆ ಬಂಗಾರದ ಪಾದುಕೆಗಳನ್ನು ಮಾಡಿಸಿಕೊಡುವುದಾಗಿ ಒಪ್ಪಿಕೊಂಡರು. ಇವರು ಮಾಡಿಸಿಕೊಟ್ಟಂತಹ ಪಾದುಕೆಗಳು 412 ಮಾಣಿಕ್ಯ ಕಲ್ಲುಗಳು ಮತ್ತು 80 ವಜ್ರಗಳನ್ನು ಹೊಂದಿದೆ ಮತ್ತು ಅವರ ಹೆಸರು 'ಪೀಟರ್' ಎಂದು ಪಾದುಕೆಗಳ ಕೆಳಭಾಗದಲ್ಲಿ ಕೆತ್ತಲಾಗಿದೆ. ಈಗಲೂ ಸಹ ಆ ಪಾದುಕೆಗಳನ್ನು 'ಪೀಟರ್ ಪಾದುಕಂ' ಎಂದು ಕರೆಯಲಾಗುತ್ತದೆ.

ಆ ಪಾದುಕೆಗಳನ್ನು ಈಗಲೂ ಸಹ ದೇವಸ್ಥಾನದಲ್ಲಿ ಕಾಪಾಡಲಾಗಿದೆ ಮತ್ತು ಪ್ರತಿ ವರ್ಷ 'ಚಿತ್ರಾ ಉತ್ಸವ' ಸಮಯದಲ್ಲಿ, ಈ ಪಾದುಕೆಗಳನ್ನು ಉತ್ಸವ ಮೂರ್ತಿ ಮೀನಾಕ್ಷಿ ಈ ಪಾದುಕೆಗಳನ್ನು ತೊಡುತ್ತಾಳೆ.





No comments:

Post a Comment