Monday, September 04, 2023

'ಇದು ನಿಮ್ಮ ವಾಹಿನಿ' ವೇದಿಕೆಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ, ಗಣ್ಯರಿಗೆ ಸನ್ಮಾನ

 ಬೆಂಗಳೂರು: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಆಚರಿಸಲ್ಪಡುವ ಶಿಕ್ಷಕರ ದಿನಾಚರಣೆಯ ಅಂಗವಾಗಿ ಇದು ನಿಮ್ಮ ವಾಹಿನಿ ವೇದಿಕೆ ವತಿಯಿಂದ ವೇದಿಕೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೆಎಸ್ ಅವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ 6ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ನಗರದ ನಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಖ್ಯಾತ ವೈದ್ಯರಾದ ಡಾಕ್ಟರ್ ಆಂಜನಪ್ಪ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಟಿವಿ5 ಕನ್ನಡ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕರಾದ ರಮಾಕಾಂತ್ ಆರ್ಯನ್, ಖ್ಯಾತ ಹಿನ್ನೆಲೆ ಗಾಯಕರಾದ ಉಷಾ ಕೋಕಿಲ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಭರತನಾಟ್ಯ, ನೃತ್ಯ, ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವೇದಿಕೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೆ.ಎಸ್, ಮಹೇಂದ್ರ ಶರ್ಮ, ಡಾಕ್ಟರ್ ಮನೋಜ್ ಕುಮಾರ್ ಬಾಲ್, ಜಹೀರ್ ಅಹ್ಮದ್, ಪವಿತ್ರ ಪರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು