Thursday, December 21, 2023

ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಜಾಹೀರಾತು ರಿಲೀಸ್!

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರ ಜಾಹೀರಾತನ್ನು ಬಿಡುಗಡೆ ಮಾಡಿದರು.


ನಂದಿನಿ ಬ್ರ್ಯಾಂಡ್​ಗೆ ರಾಯಭಾರಿಯಾಗಲು ನಟ ಶಿವರಾಜ್​ಕುಮಾರ್​ ಕೂಡ ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಇದು ನಮ್ಮ ಸರ್ಕಾರದ್ದು, ನಮ್ಮ ಪ್ರಾಡೆಕ್ಟ್. ನಾವು ನಮ್ಮ ರೈತರಿಗೋಸ್ಕರ ಯಾವಾಗಲು ಜೊತೆಯಲ್ಲಿರುತ್ತೇನೆ. ಇದು ನಮ್ಮ ತ್ಯಾಗ ಅಲ್ಲ ನಮ್ಮ ಕರ್ತವ್ಯ ಎಂದು ನಟ ಶಿವರಾಜ್​ ಕುಮಾರ್ ಹೇಳಿದ್ದಾರೆ.

https://twitter.com/Mooviecampus/status/1737774327313912021


ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್​ ರಾಯಭಾರಿಯಾಗಿದ್ದರು. ಇದೀಗ ಶಿವರಾಜ್ ಕುಮಾರ್ ಅವರನ್ನ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ನಟ ಶಿವರಾಜ್ ಕುಮಾರ್​ಗೆ ಹೂಗುಚ್ಚ ನೀಡಿ ಸನ್ಮಾನಿಸಲಾಯಿತು.

No comments:

Post a Comment