ಮುತ್ತತ್ತಿ (Mutthatthi)
ಬೆಂಗಳೂರಿನಿಂದ 100 ಕಿ.ಮೀ. ದೂರದ ರಮ್ಯ ಕಾವೇರಿ ತಟ ‘ಮಾತೆತ್ತಿದರೆ ಮುತ್ತತ್ತಿ’ ಎಂಬ ಗಾದೆಯನ್ನು ಮಹಾನಗರದಲ್ಲಿ ಚಲಾವಣೆಗೆ ತಂದಿದೆ. ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು, ಹಲಗೂರು ಹೋಬಳಿಯಲ್ಲಿರುವ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಪ್ರಸಿದ್ದ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ.
ಆಂಜನೇಯಸ್ವಾಮಿ ಮೂರ್ತಿಯು ಮುತ್ತತ್ತಿಯಲ್ಲಿ ಭೂಮಿಯಿಂದ ಮೂಡಿದ್ದು ಸದರಿ ಜಾಗದಲ್ಲಿ ಮೂಡಿರುವ ಮೂರ್ತಿಯನ್ನು ಭೂಮಿಯಲ್ಲೇ ಹೂತು ಹನುಮಂತನ ವಿಗ್ರಹವನ್ನು ಕೆತ್ತಿಸಿ ಪ್ರತಿಷ್ಠಾಪನೆ ಮಾಡಿ ಆ ಜಾಗದಲ್ಲಿ ದೇವಸ್ಥಾನವನ್ನು 1986-87ನೇ ಸಾಲಿನಲ್ಲಿ ಸಾರ್ವಜನಿಕ/ ಭಕ್ತಾಧಿಗಳ ವಂತಿಕೆಯಿಂದ ಹಣ ಕ್ರೂಢೀಕರಿಸಿ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಸದರಿ ಜಾಗದಲ್ಲಿ ನಿರ್ಮಿಸಿರುವ ಹನುಮಂತನು ಸಾರ್ವಜನಿಕ/ಭಕ್ತಾಧಿಗಳಿಗೆ ಅಭಯ ಹಸ್ತವನ್ನು ನೀಡುತ್ತಾ ನೆಲೆಸಿದ್ದಾನೆ.
***

No comments:
Post a Comment