Sunday, May 24, 2026

ರಾಘವೇಂದ್ರ ಅಡಿಗ ಎಚ್ಚೆನ್.




ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿದ ಬುದ್ದ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಅವರು ಹೇಳಿದರು.


ನಗರದ ನಯನ ಸಭಾಂಗಣದಲ್ಲಿ ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಬುದ್ದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಹಾಗೂ 22ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಬುದ್ದ ಶಾಂತಿಯ ಮೂಲಕವೇ ಎಲ್ಲರ ಮನಸ್ಸನ್ನು ಗೆದ್ದು ಜಗತ್ತಿಗೆ ಜ್ಯೋತಿ ಬೆಳಗಿನ ಜ್ಞಾನಿಯಾದ ಅದರಂತೆ ಬುದ್ದನ ಮಾರ್ಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೂಡ ಶೋಷಿತರ ಪರವಾಗಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಮಹಾನ್ ಚೇತನರಾದರು. ಈ ಇಬ್ಬರ ತತ್ವ ಆದರ್ಶಗಳು ಇಂದಿನ ಪೀಳಿಗೆಗೆ ಅವಶ್ಯಕವಾಗಿದೆ ಎಂದರು.


ಉಪ ಪೋಲಿಸ್ ಆಯುಕ್ತ ಡಾ.ಹೆಚ್.ಮಂಜುನಾಥ್ ಬಾಬು ಮಾತನಾಡಿ, ನಾವೆಲ್ಲರೂ ಕಾನೂನಿನ ಅಡಿಯಲ್ಲಿ ಬದುಕುತ್ತಿದ್ದೇವೆ ಎಂದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾರಣ. ಬುದ್ದನ ಶಾಂತಿ ಮಾರ್ಗ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ ನಾವೆಲ್ಲರೂ ಮಾದರಿಯಾಗಿ ತೆಗೆದುಕೊಳ್ಳಬೇಕು. ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟಲು ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.


ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ, ಡಿಸಿಪಿ ಡಾ.ಹೆಚ್.ಡಾ.ಮಂಜುನಾಥ್ ಬಾಬು ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಿ ಸತ್ಕಾರ ಮಾಡಲಾಯಿತು.


ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಗಂಡಸಿ ಸದಾನಂದಸ್ವಾಮಿ, ಸುಬ್ರಹ್ಮಣ್ಯ ಹಂಡಿಗೆ, ಶಿವರಾಜ್ ಮೌರ್ಯ ಅವರಿಗೆ ಮಾಧ್ಯಮ ಸೇವಾ ರತ್ನ ಪ್ರಶಸ್ತಿ ಹಾಗೂ ಸಂಜೀವಿನಿ ರೇಖಿ ಹೀಲಿಂಗ್ ಸೆಂಟರ್ ನ ಡಾ.ವಿ.ಭರಣಿ ರಾಜು ಅವರಿಗೆ ವಿಶಿಷ್ಟ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಪುಟಾಣಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.


ಈ ಸಂಧರ್ಭದಲ್ಲಿ ಇದು ನಿಮ್ಮ ವಾಹಿನಿಯ ಪ್ರದಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ಎಸ್, ಇವೆಂಟ್ ಕೊ- ಅರ್ಡಿನೆಟರ್ ಚಂದ್ರಿಕಾ ಬಿ.ವಿ.ಇದ್ದರು.






Friday, May 22, 2026

ನಾಳೆ ಇದು ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಬುದ್ಧ ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

 


ಇದು ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಬುದ್ಧ ಮತ್ತು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಹಾಗೂ 22 ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಹೇಳಿದರು.




ಭಾನುವಾರ 24 ರಂದು ಸಂಜೆ 4 ಗಂಟೆಗೆ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೊದಲಿಗೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ವ್ಯಕ್ತಿಗಳು ಭಾಗವಹಿಸುವರು ಎಂದರು.


ಟಿವಿ5 ಕನ್ನಡ ಚಾನೆಲ್ ನ ಪ್ರಧಾನ ಸಂಪಾದಕ ರಮಾಕಾಂತ್ ಆರ್ಯಾನ್, ಕರ್ನಾಟಕ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ತಿಳಿಸಿದರು.


ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ, ಹೋರಾಟಗಾರ ಗಂಡಸಿ ಸದಾನಂದಸ್ವಾಮಿ ವಹಿಸಿದರೆ. ಮುಖ್ಯ ಅತಿಥಿಗಳಾಗಿ ಉಪ ಪೋಲಿಸ್ ಆಯುಕ್ತ (ಡಿಸಿಪಿ) ಡಾ.ಹೆಚ್.ಮಂಜುನಾಥ ಬಾಬು, ಥರ್ಡ್ ಐ ಯೂಟ್ಯೂಬ್ ಸಂಸ್ಥಾಪಕ ಸುಬ್ರಹ್ಮಣ್ಯ ಎಸ್ ಹಂಡಿಗೆ, ಸಂಜೀವಿನಿ ರೇಖಿ ಹೀಲಿಂಗ್ ಸೆಂಟರ್ ನ ಸಂಸ್ಥಾಪಕ ಅಧ್ಯಕ್ಷೆ ಡಾ.ವಿ.ಭರಣಿ ರಾಜು, ಪತ್ರಕರ್ತ ಶಿವರಾಜ್ ಮೌರ್ಯ, ಇವೆಂಟ್ ಕೊ-ಆರ್ಡಿನೇಟರ್ ಚಂದ್ರಿಕಾ ಬಿ.ವಿ ವಹಿಸಲಿದ್ದಾರೆ ಎಂದು ಕಿಶೋರ್ ಹೇಳಿದರು.